ಬ್ರೇಕಿಂಗ್ ನ್ಯೂಸ್
12-08-25 01:49 pm Mangalore Correspondent ಕರಾವಳಿ
ಮಂಗಳೂರು, ಆ.12 : ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ| ಪ್ರಶಾಂತ್ ಪೈ ಅವರು ಕಾವೂರು ಠಾಣೆಗೆ ದೂರು ನೀಡಿದ್ದಾರೆ.
ಉದ್ಯಾನವನದ ಪ್ರಾಣಿಗಳಿಗೆ ಮಾಂಸ ನೀಡಲು ಹೊಸ ಗುತ್ತಿಗೆದಾರರು ಗುತ್ತಿಗೆ ಪಡೆದಿದ್ದಾರೆ. ಸದ್ರಿ ಮಾಂಸವನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹಿಂದಿನ ಟೆಂಡರುದಾರರ ನೌಕರನೊಬ್ಬ ಆಗಸ್ಟ್ 7ರಂದು ಉದ್ಯಾನವನದ ಸಿಬಂದಿಗೆ ಕರೆ ಮಾಡಿ, ಮಾಂಸದಲ್ಲಿ ವಿಷ ಬೆರೆಸುವಂತೆ ತಿಳಿಸಿದ್ದಾನೆ. ಆ ಮೂಲಕ ವಿಷಾಹಾರ ನೀಡಿ ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಿರುವುದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಅರಣ್ಯಾಧಿಕಾರಿಯೂ ಆಗಿರುವ ಪ್ರಶಾಂತ ಪೈ ಆಗ್ರಹಿದ್ದಾರೆ.
ಘಟನೆ ಬಗ್ಗೆ ಇದೇ ಆ.8ರಂದು ಪಿಲಿಕುಳ ಜೈವಿಕ ಉದ್ಯಾನವನದ ವೈಧ್ಯಾಧಿಕಾರಿ ಡಾ.ದಿವ್ಯಾ ಗಣೇಶ್ ಅವರು ಪ್ರಾಧಿಕಾರದ ನಿರ್ದೇಶಕರಿಗೆ ಈ ಕುರಿತಾಗಿ ದೂರು ನೀಡಿದ್ದರು. ಇದರಂತೆ, ಪಿಲಿಕುಳ ಜೈವಿಕ ಉದ್ಯಾನವನದ ನೌಕರ ಹರೀಶ್ ಅವರನ್ನು ವಿಚಾರಿಸಿದಾಗ, ಈ ಹಿಂದೆ ಮಾಂಸ ಪೂರೈಕೆಗೆ ಟೆಂಡರ್ ಪಡೆದಿದ್ದ ಖಾದರ್ (ಅವರು ಟೆಂಡರುದಾರರೂ ಸಹ ಆಗಿರುತ್ತಾರೆ) ನಿರ್ದೇಶನದ ಮೇರೆಗೆ ಅಬ್ಬಾಸ್ ಹಾಗೂ ಹನೀಫ್ ಎಂಬವರು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಮಾಂಸವನ್ನು ವಿತರಿಸುತ್ತಿದ್ದರು. ಈ ಬಾರಿ ಬೇರೆಯವರು ಬಿಡ್ ಹಾಕಿದ್ದರಿಂದ ಟೆಂಡರ್ ಬೇರೆಯವರಿಗೆ ಹೋಗಿತ್ತು. ಆ.7ರಂದು ಅಬ್ಬಾಸ್ ಅವರ ನೌಕರ ಹನೀಫ್ ಎಂಬವರು ಪಿಲಿಕುಳದ ನೌಕರ ಹರೀಶ್ ಅವರಿಗೆ ಕರೆ ಮಾಡಿ, ಈಗಿನ ಟೆಂಡರುದಾರರು ಪೂರೈಸುತ್ತಿರುವ ಮಾಂಸಕ್ಕೆ ಕೊಳೆತ ಮಾಂಸ ಅಥವಾ ವಿಷ ಮಾಂಸವನ್ನು ಬೆರೆಸಿ, ಸದ್ರಿ ಟೆಂಡರನ್ನು ತಿರಸ್ಕರಿಸುವಂತೆ ಮಾಡಲು ಹುನ್ನಾರ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈಗಿರುವ ಟೆಂಡರುದಾರರನ್ನು ತಿರಸ್ಕೃತಗೊಳಿಸಲು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳನ್ನು ಕೊಲ್ಲಲು ಹುನ್ನಾರ ಮಾಡಿರುವುದು ತಿಳಿದುಬಂದಿತ್ತು.
ಈ ವಿಷಯದ ಬಗ್ಗೆ, ಹರೀಶ್ ಮತ್ತು ಹನೀಫ್ ಅವರು ಮಾತನಾಡಿರುವ ಆಡಿಯೋ ರೆಕಾರ್ಡ್ ತುಣುಕನ್ನು ಪೊಲೀಸರಿಗೆ ನೀಡಿದ್ದಾರೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಹಾಗೂ ಅಬ್ಬಾಸ್ ಹಾಗೂ ಹನೀಫ್ ಎಂಬವರ ಮೊಬೈಲ್ ಪೋನ್ಗಳನ್ನು ಪರೀಲಿಸಿದರೆ, ಇದರ ಹಿಂದೆ ಯಾರೆಲ್ಲ ಇದ್ದಾರೆ? ಯಾರ ಕೈವಾಡ ಇರುಬಹುದು? ಎಂಬ ಬಗ್ಗೆ, ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ದೂರು ಸಲ್ಲಿಸಿದ್ದಾರೆ.
A shocking allegation has surfaced from the Pilikula Biological Park, where the zoo’s director, Dr. Prashanth Pai, has lodged a complaint with Kavoor Police claiming that a former meat supply contractor conspired to poison the park’s animals after losing the latest supply tender.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm