ಬ್ರೇಕಿಂಗ್ ನ್ಯೂಸ್
12-08-25 08:34 pm Mangalore Correspondent ಕರಾವಳಿ
ಮಂಗಳೂರು, ಆ.12 : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆ ತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುವುದು. ಈ ನಿಟ್ಟಿನಲ್ಲಿ SOP ಡ್ರಾಫ್ಟ್ ಅನ್ನ ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗೆ ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
A high-level meeting was held today at Vidhana Soudha, Bengaluru, under the leadership of Legislative Assembly Speaker U.T. Khader and Dakshina Kannada District In-Charge Minister, to discuss legal provisions for allowing red stone mining in coastal Karnataka, including Dakshina Kannada district.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm