ಬ್ರೇಕಿಂಗ್ ನ್ಯೂಸ್
13-08-25 10:17 am Mangalore Correspondent ಕರಾವಳಿ
ಉಳ್ಳಾಲ, ಆ.13 : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ.

ಘಟನೆಯಲ್ಲಿ ರಾಘವೇಂದ್ರ ಅವರ ತಲೆಯು ರಸ್ತೆ ಬದಿಯ ಆವರಣ ಗೋಡೆಗೆ ಬಡಿದ ಪರಿಣಾಮ ಸ್ಥಳದಲ್ಲಿ ರಕ್ತದೋಕುಳಿಯೇ ಹರಿದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವರಿಸಿದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲೇ ಅವರು ಉಸಿರು ಚೆಲ್ಲಿದ್ದರೆನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಾಘವೇಂದ್ರ ಅವರು ತಾಯಿ, ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
In a tragic road accident on Tuesday night, a scooter skidded out of control and crashed into the compound wall of a roadside house in the Someshwar Town Panchayat limits, Ambika Road, leading to the death of the rider.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm