ಬ್ರೇಕಿಂಗ್ ನ್ಯೂಸ್
13-08-25 10:22 pm Mangalore Correspondent ಕರಾವಳಿ
ಬಂಟ್ವಾಳ, ಆ.13 : ಲಂಚದ ಹಣಕ್ಕೆ ಕೈಯೊಡ್ಡಿದ ಬಂಟ್ವಾಳ ಉಪ ತಹಶೀಲ್ದಾರ್ ಹಾಗೂ ಇತರ ಇಬ್ಬರು ಸಿಬಂದಿಯನ್ನು ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದೆ.
ಸಜಿಪ ಮುನ್ನೂರು ಗ್ರಾಮದ ಸರ್ವೇ ನಂಬರ್ 102/1ರಲ್ಲಿ ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು
ಬಂಟ್ವಾಳ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದರ ದಾಖಲಾತಿ ಫೈಲನ್ನು ಕಳೆದ ಏಪ್ರಿಲ್ ತಿಂಗಳಿನಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲೇ ಬಾಕಿ ಇಟ್ಟುಕೊಂಡಿದ್ದು ಈ ಬಗ್ಗೆ ದೂರುದಾರರು ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಎಂಬವರಲ್ಲಿ ವಿಚಾರಿಸಿದ್ದರು. ಪೌತಿ ಖಾತೆ ಮಾಡಿಕೊಡಲು 1,500 ರೂ. ನೀಡುವಂತೆ ಕೇಸ್ ವರ್ಕರ್ ಸಂತೋಷ್ ಹಾಗೂ ಪೌತಿ ಖಾತೆ ಮಾಡಿಕೊಡಲು ತಹಶೀಲ್ದಾರ್ ಅವರಿಗೆ 20,000 ರೂ. ನೀಡಬೇಕು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಕೇಳಿದ್ದರು ಎಂದು ದೂರುದಾರರು ಸಾಕ್ಷಿಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬುಧವಾರ ಮಧ್ಯಾಹ್ನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಬ್ರೋಕರ್ ಗಣೇಶ್ ವಾಮದಪದವು ಅವರ ಮೂಲಕ 20,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಬ್ರೋಕರ್ ಗಣೇಶ್ ವಾಮದಪದವು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್, ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
In a major anti-corruption operation, Lokayukta officials caught Bantwal Deputy Tahsildar Rajesh Naik red-handed while allegedly accepting a bribe of ₹20,000. Along with him, a case worker and a broker have also been arrested.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am