ಬ್ರೇಕಿಂಗ್ ನ್ಯೂಸ್
14-08-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.14 : ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯಾಚರಣೆ 15ನೇ ದಿನವೂ ಮುಂದುವರಿದಿದ್ದು ನೇತ್ರಾವತಿ ಸ್ನಾನಘಟ್ಟ, ಬಂಗ್ಲೆಗುಡ್ಡೆ, ಕಲ್ಲೇರಿ ಕಾಡಿನ ಬಳಿಕ ದ್ವಾರಕಾಶ್ರಮದ ಬಳಿ ಶೋಧ ಕಾರ್ಯ ನಡೆಸಲಾಗಿದೆ. ಇಲ್ಲಿ 17ನೇ ಪಾಯಿಂಟ್ ಗುರುತಿಸಿ ಶೋಧಕ್ಕಾಗಿ ಅಗೆದಿದ್ದು ಅಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.
13ನೇ ಸ್ಥಳದಲ್ಲಿ ಹಲವು ಹೆಣ ಹೂತಿದ್ದಾಗಿ ದೂರುದಾರ ಹೇಳಿದ್ದ. ಹೀಗಾಗಿ ಎರಡು ದಿನ ಕಾರ್ಯಾಚರಣೆ ನಡೆಸಿದ್ದು ಅಲ್ಲಿ ಶೋಧ ನಡೆಸಿದರೂ ಯಾವುದೇ ಕುರುಹು ಸಿಕ್ಕಿರಲಿಲ್ಲ. ಅಲ್ಲಿ ಎರಡು ದಿನಗಳ ಕಾಲ 18 ಅಡಿ ಆಳಕ್ಕೆ, ಮತ್ತೊಂದು ಕಡೆ 13 ಅಡಿ ಅಗಲಕ್ಕೆ ಅಗೆಯಲಾದರೂ, ಕುರುಹು ಪತ್ತೆಯಾಗಿಲ್ಲ. ಈ ನಡುವೆ ಇಬ್ಬರು ಸಾಕ್ಷಿದಾರರು ಮುಂದೆ ಬಂದಿದ್ದು, 13ನೇ ಜಾಗದಲ್ಲಿ ಶವ ಹೂತಿದ್ದನ್ನು ನಾವೂ ನೋಡಿದ್ದೇವೆ ಎಂದು ಸ್ಥಳೀಯರಾದ ತುಕಾರಾಮ ಗೌಡ ಹಾಗೂ ಪುರಂದರ ಗೌಡ ಹೇಳಿದ್ದಾರೆ.
ಎಸ್ ಐಟಿಗೆ ದೂರು ಕೊಡಲಾಗಿದೆ. ಅವರು ತನಿಖೆ ನಡೆಸಿದ್ರೆ ನಾವು ಎಲ್ಲಾ ಸಾಕ್ಷಿ ಹೇಳಲು ಸಿದ್ಧ ಎಂದು ಈ ಇಬ್ಬರು ತಿಳಿಸಿದ್ದಾರೆ. ನೇತ್ರಾವತಿ ನದಿ ತಡದಲ್ಲಿ ಶವ ಹೂತಿರುವ ಪ್ರಕರಣದಲ್ಲಿ ಒಬ್ಬ ಅಧಿಕಾರಿಯ ಪಾತ್ರವೂ ಇದೆ, ಅದನ್ನು ಎಸ್ ಐಟಿ ಬಳಿ ಹೇಳುತ್ತೇವೆ. ಅಂಬಾಸಿಡರ್ ಕಾರಿನ ಡಿಕ್ಕಿಯಿಂದ ಹೆಣ ತೆಗೆದು ಸಂಜೆ 4-5 ಗಂಟೆಯ ವೇಳೆಗೆ ಕದ್ದು ಮುಚ್ಚಿ ಹೆಣ ಹೂತಿದ್ದನ್ನು ನಾನು ನೋಡಿದ್ದೇನೆ ಎಂದು ಪುರಂದರ ಗೌಡ ಹೇಳಿದ್ದಾರೆ.
ಇದರ ಬಗ್ಗೆ ಭಯದಿಂದ ಇಲ್ಲಿಯವರೆಗೂ ಹೇಳಿರಲಿಲ್ಲ. ಈಗ ಎಸ್ ಐಟಿ ರಚನೆ ಮಾಡಿರುವುದರಿಂದ ಧೈರ್ಯದಿಂದ ಹೇಳಿದ್ದೇವೆ ಎಂದು ಹೇಳಿದ್ದಾರೆ. ಈಗ ಹೆಣದ ಕುರುಹು ಸಿಗದಿರಲು ಆ ಜಾಗ ಅಭಿವೃದ್ಧಿಯಾಗಿರುವುದೇ ಕಾರಣ ಎಂದು ಪುರಂದರಗೌಡ ಹೇಳಿದ್ದಾರೆ. ಭಾರಿ ಮಳೆ ಬಂದು ಪ್ರವಾಹ ಆದ ಕಾರಣ, ಅಣೆಕಟ್ಟು ಕೆಲಸದ ಕಾರಣದಿಂದಾಗಿಯೂ ಆ ಜಾಗದ ವ್ಯತ್ಯಾಸ ಆಗಿದೆ ಎಂದು ಪುರಂದರ ಗೌಡ ಹೇಳಿದ್ದಾರೆ.
The search operation for alleged buried bodies in Dharmasthala entered its 15th day, with Special Investigation Team (SIT) officials shifting their focus to the area near Dwarkashrama after earlier digs at Netravati bathing ghat, Banglegudde, and Kalleri forest yielded no results.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm