ಬ್ರೇಕಿಂಗ್ ನ್ಯೂಸ್
16-08-25 11:11 pm Mangalore Correspondent ಕರಾವಳಿ
ಮಂಗಳೂರು, ಆ.16 : ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡರೆ, ರೈಲು ಸಂಚಾರದಲ್ಲೂ ವ್ಯತ್ಯಯವಾಗಿದೆ.
ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ಬಳಿಯಿಂದ ಹಲವೆಡೆ ಗುಡ್ಡ ಕುಸಿದಿದ್ದು ಮರ, ಗಿಡಗಳ ಸಮೇತ ರಸ್ತೆಗೆ ಗುಡ್ಡ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ಘಾಟ್ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು ಟ್ರಾಫಿಕ್ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಶನಿವಾರ ಸಂಜೆಯಿಂದಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ.
ಶಿರಾಡಿ ಘಾಟ್ ಭಾಗದ ಹಲವೆಡೆ ಕುಸಿತ ಆಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ಸಿಲುಕಿದ್ದು ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇದೇ ವೇಳೆ ಘಾಟ್ ನಲ್ಲಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರಗಳು ರಸ್ತೆಗೆ ಬಿದ್ದಿದ್ದು ಮರಗಳನ್ನು ತೆರವುಗೊಳಿಸಲು ಪೊಲೀಸರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ಇದೇ ವೇಳೆ, ಶಿರಾಡಿ ಘಾಟಿಯಲ್ಲಿ ರೈಲು ಹಳಿಯ ಮೇಲೂ ಮಣ್ಣು ಕುಸಿಯುತ್ತಿದ್ದು ರೈಲು ಸಂಚಾರದಲ್ಲು ವ್ಯತ್ಯಯವಾಗಿದೆ. ಬೆಂಗಳೂರು - ಕಾರವಾರ ರೈಲನ್ನು ಹಾಸನದ ಬಳಿಕ ಡೈವರ್ಟ್ ಮಾಡಿದ್ದು ಸುಬ್ರಹ್ಮಣ್ಯ ಹಳಿಯ ಬದಲು ಹುಬ್ಬಳ್ಳಿ ಮೂಲಕ ಕಾರವಾರ ತಲುಪುವಂತೆ ಮಾಡಲಾಗಿದೆ.
ಹಾಸನ ರೈಲಿನಲ್ಲಿ ಬೆಂಕಿ, ನಂದಿಸಿದ ಸಿಬಂದಿ
ಇದೇ ವೇಳೆ, ಚಲಿಸುತ್ತಿದ್ದ ರೈಲಿನ ಬೋಗಿಯ ಅಡಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತು ಹಾಸನ ರೈಲ್ವೇ ನಿಲ್ದಾಣದಲ್ಲಿ ಬೆಂಕಿ ನಂದಿಸಿ ಸಿಬಂದಿ ಅಪಾಯ ತಪ್ಪಿಸಿದ್ದಾರೆ. ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಾಸನ ರೈಲು ನಿಲ್ದಾಣ ಪ್ಲಾಟ್ ಸಂಖ್ಯೆ ಎರಡರಲ್ಲಿ ನಿಂತಿದ್ದಾಗ ಬೋಗಿವೊಂದರ ಕೆಳ ಭಾಗದಲ್ಲಿ ಬೆಂಕಿ ಕಂಡುಬಂದಿದೆ. ತಕ್ಷಣವೇ ಇದನ್ನು ಗಮನಿಸಿದ ಸಿಬಂದಿ ಬೆಂಕಿ ನಂದಿಸಿದ್ದಾರೆ.
Heavy rainfall in the Malnad region has triggered a massive landslide at Shiradi Ghat on National Highway 75, severely disrupting both road and rail traffic between Bengaluru and Mangaluru.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm