ಬ್ರೇಕಿಂಗ್ ನ್ಯೂಸ್
17-08-25 05:26 pm Mangalore Correspondent ಕರಾವಳಿ
ಉಳ್ಳಾಲ, ಆ.17 : ತೊಕ್ಕೊಟ್ಟಿನಲ್ಲಿ ನಿನ್ನೆ ನಡೆದಿದ್ದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಪೇದೆಗೆ ಅಶ್ಲೀಲ ಕೈ ಸನ್ನೆ ಮಾಡಿ ಸೊಂಟಕ್ಕೆ ಕೈ ಹಾಕಿ ಮಾನಭಂಗ ಮಾಡಿದ ಆರೋಪದಲ್ಲಿ ಇಬ್ಬರು ಅರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟಿನ ಜೈ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಘಟನೆ ನಡೆದಿದೆ.





ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ನಾಸಿಕ್ ಬ್ಯಾಂಡ್ ನ ಯುವಕರ ತಂಡವೊಂದು ರಾತ್ರಿ 11.50 ರ ವೇಳೆಗೆ ತೊಕ್ಕೊಟ್ಟು ಒಳಪೇಟೆಯ ತಾಜ್ ಸೈಕಲ್ ಶಾಪ್ ಬಳಿ ತಲುಪಿದಾಗ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಕಾಲಹರಣ ಮಾಡಿಕೊಂಡು ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ನಡೆದಾಡಲು ಅವಾಕಶ ನೀಡದೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಪೇದೆ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ ಹೋಗುವಂತೆ ಹೇಳಿದಾಗ ಆರೋಪಿ ದೀಪಕ್ ಎಂಬಾತ ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮ ಅವರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ, ನೀವು ಯಾರು ಮುಂದಕ್ಕೆ ಹೋಗಿ ಅಂತ ಹೇಳಲು. ಪೊಲೀಸರು ಚಪ್ರಿಗಳು ಅಂತ ಹೇಳಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ.
ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರ ಸೊಂಟಕ್ಕೆ ಕೈ ಹಾಕಿ ತಳ್ಳಿದ್ದು, ಮೈಗೆ ಕೈ ಹಾಕಿ ಮಾನಭಂಗ ಮಾಡಿರೋದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಘಟನೆ ವೇಳೆ ಪೊಲೀಸರು ಮತ್ತು ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ನಡುವೆ ತಳ್ಳಾಟ ನಡೆದಿದೆ. ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಬಿಎನ್ ಎಸ್ 2023(U/s-126(2), 132, 74, 3(5) ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.
🚨 Tension at Mosaru Kudike Procession 🚨
— Headline Karnataka (@hknewsonline) August 17, 2025
Two youths — Deepak (Asaigoli) & Kiran (Thokottu) — arrested for obstructing #police duty & misbehaving with a woman constable during the #Thokottu festival procession. #Mangalore #BREAKING pic.twitter.com/Wh2vr4fzPe
Tension broke out during the Mosaru Kudike festival procession at Tokkottu last night after two youths allegedly obstructed police duty and misbehaved with a woman constable. The Ullal police have arrested the accused, identified as Deepak from Asaigoli and Kiran from Thokottu
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm