ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm