ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm