ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm