ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm