ಬ್ರೇಕಿಂಗ್ ನ್ಯೂಸ್
20-08-25 10:19 pm Mangalore Correspondent ಕರಾವಳಿ
ಮಂಗಳೂರು, ಆ.20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ಧಿ ಪಡೆದಿದೆ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀಕೃಷ್ಣ ಜನ್ಮಾಷ್ಟಮಿ ಈ ಭಾಗದಲ್ಲಿ ಸಂಭ್ರಮದ ಹಬ್ಬವಾಗಿದ್ದು ಪೊಲೀಸರು ಸಂಜೆ ಆರು ಗಂಟೆಗೆ ಬಂದು ಸೌಂಡ್ ಬಾಕ್ಸ್ ಗಳನ್ನು ತೆಗೆದುಕೊಂಡು ಹೋಗಿದ್ದರಿಂದ ಕೃಷ್ಣವೇಷ ಸ್ಪರ್ಧೆ, ಭರತನಾಟ್ಯ, ರಸಮಂಜರಿ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡು ಹಬ್ಬದ ಸಂಭ್ರಮದಲ್ಲಿದ್ದವರಿಗೆ ಇದೇ ಮೊದಲ ಬಾರಿಗೆ ನಿರಾಸೆಯಾಗಿದೆ. ಅಲ್ಲದೇ ಕಾರ್ಯಕ್ರಮ ಆಯೋಜಕರ ಮೇಲೆ, ಸೌಂಡ್ ಸಿಸ್ಟಮ್ ಮಾಲಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಸಂದರ್ಭದಲ್ಲೂ ಇಂತಹ ನಿಯಮ ಆದೇಶಗಳಿದ್ದರೂ ಹಬ್ಬದ ಸಂಭ್ರಮಕ್ಕೆ ಕಿಂಚಿತ್ತೂ ಅಡ್ಡಿಪಡಿಸಿಲ್ಲ. ರಾತ್ರಿ ಹತ್ತೂವರೆ ನಂತರ ಯಾವುದೇ ಕಾರ್ಯಕ್ರಮ ನಡೆಯಬಾರದು, ಮೊಸರು ಕುಡಿಕೆಗೆ ಕಟ್ಟಿರುವ ಮಡಿಕೆಗಳನ್ನು ನಾಳೆ ಬಂದು ಒಡೆಯಿರಿ ಎಂದು ಪೊಲೀಸರು ಹೇಳುವುದು ಎಷ್ಟು ಸರಿ? ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚೌತಿ, ನವರಾತ್ರಿ, ಹುಲಿವೇಷ, ಹೀಗೆ ಇಡೀ ದಕ್ಷಿಣಕನ್ನಡ ಜಿಲ್ಲೆ ಹಬ್ಬದ ಸಂಭ್ರಮದಲ್ಲಿ ಮುಳುಗಲಿದ್ದು ಯಾವುದೇ ಗೊಂದಲ ಉಂಟಾಗದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಜನ ರೊಚ್ಚಿಗೆದ್ದರೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
BJP MLA Vedavyas Kamath has strongly criticized the Karnataka Congress government for allegedly disrupting Krishna Janmashtami celebrations in Dakshina Kannada district under the pretext of enforcing legal restrictions. Speaking during the assembly session, Kamath accused the government of hurting Hindu religious sentiments.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am