ಬ್ರೇಕಿಂಗ್ ನ್ಯೂಸ್
21-08-25 03:44 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.21 : ಧರ್ಮಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಿದ್ದ ದೂತ ಯೂಟ್ಯೂಬ್ ಚಾನೆಲಿನ ಸಮೀರ್ ಎಂ.ಡಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದತ ಬೆನ್ನಲ್ಲೇ ಸಮೀರ್ ಪರ ವಕೀಲರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ಠಾಣೆ ಪಿಎಸ್ಐ ಸಮರ್ಥ್ ಗಾಣಿಗೇರ ದೂರಿನಂತೆ ಕಳೆದ ಜುಲೈ 12ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ತನ್ನ ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡಿದ್ದ. ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಸಾವಿರಾರು ಹೆಣಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ್ದಾನೆಂದು ತಪ್ಪಾಗಿ ಬಿಂಬಿಸಿ ವಿಡಿಯೋ ಪ್ರಸಾರ ಮಾಡಿದ್ದ.
ಎಐ ತಂತ್ರಜ್ಞಾನದಲ್ಲಿ ವಿಡಿಯೋ ಸೃಷ್ಟಿಸಿ, ಆಮೂಲಕ ಜನರ ಭಾವನೆ ಕದಡಿಸಲು ಯತ್ನಿಸಿದ್ದಾಗಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಆ ರೀತಿ ಕೇಸು ದಾಖಲಾಗಿರದಿದ್ದರೂ, ಸಾವಿರ ಜನರನ್ನು ರೇಪ್ ಮಾಡಿ ಕೊಲೆಗೈದಿದ್ದಾಗಿ ಸುದ್ದಿ ಮಾಡಿ ಜನರ ಭಾವನೆ ಕದಡುವಂತೆ ಮಾಡಿದ್ದ. ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಧರ್ಮಸ್ಥಳ ಠಾಣೆ ಪಿಎಸ್ಐ, ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಜುಲೈ 12 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೆಣ ಹೂತ ಪ್ರಕರಣ ಉಲ್ಟಾ ಹೊಡೆಯುತ್ತಲೇ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಮೀರ್ ಬಂಧನ ಭೀತಿಯಲ್ಲಿರುವುದರಿಂದ ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗಾಗಿ ಸಮೀರ್ ಪರ ವಕೀಲರು ಮಂಗಳೂರಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
An FIR has been filed against Sameer M.D., associated with the YouTube channel ‘Doota’, for allegedly spreading false and inflammatory news claiming that over a thousand people were raped and murdered in Dharmasthala. Belthangady police have launched a search operation to arrest the accused.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm