ಬ್ರೇಕಿಂಗ್ ನ್ಯೂಸ್
21-08-25 03:44 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.21 : ಧರ್ಮಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಿದ್ದ ದೂತ ಯೂಟ್ಯೂಬ್ ಚಾನೆಲಿನ ಸಮೀರ್ ಎಂ.ಡಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದತ ಬೆನ್ನಲ್ಲೇ ಸಮೀರ್ ಪರ ವಕೀಲರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ಠಾಣೆ ಪಿಎಸ್ಐ ಸಮರ್ಥ್ ಗಾಣಿಗೇರ ದೂರಿನಂತೆ ಕಳೆದ ಜುಲೈ 12ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ತನ್ನ ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡಿದ್ದ. ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಸಾವಿರಾರು ಹೆಣಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ್ದಾನೆಂದು ತಪ್ಪಾಗಿ ಬಿಂಬಿಸಿ ವಿಡಿಯೋ ಪ್ರಸಾರ ಮಾಡಿದ್ದ.
ಎಐ ತಂತ್ರಜ್ಞಾನದಲ್ಲಿ ವಿಡಿಯೋ ಸೃಷ್ಟಿಸಿ, ಆಮೂಲಕ ಜನರ ಭಾವನೆ ಕದಡಿಸಲು ಯತ್ನಿಸಿದ್ದಾಗಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಆ ರೀತಿ ಕೇಸು ದಾಖಲಾಗಿರದಿದ್ದರೂ, ಸಾವಿರ ಜನರನ್ನು ರೇಪ್ ಮಾಡಿ ಕೊಲೆಗೈದಿದ್ದಾಗಿ ಸುದ್ದಿ ಮಾಡಿ ಜನರ ಭಾವನೆ ಕದಡುವಂತೆ ಮಾಡಿದ್ದ. ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಧರ್ಮಸ್ಥಳ ಠಾಣೆ ಪಿಎಸ್ಐ, ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಜುಲೈ 12 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೆಣ ಹೂತ ಪ್ರಕರಣ ಉಲ್ಟಾ ಹೊಡೆಯುತ್ತಲೇ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಮೀರ್ ಬಂಧನ ಭೀತಿಯಲ್ಲಿರುವುದರಿಂದ ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗಾಗಿ ಸಮೀರ್ ಪರ ವಕೀಲರು ಮಂಗಳೂರಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
An FIR has been filed against Sameer M.D., associated with the YouTube channel ‘Doota’, for allegedly spreading false and inflammatory news claiming that over a thousand people were raped and murdered in Dharmasthala. Belthangady police have launched a search operation to arrest the accused.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm