ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm