ಬ್ರೇಕಿಂಗ್ ನ್ಯೂಸ್
23-08-25 01:29 pm Udupi Correspondent ಕರಾವಳಿ
ಉಡುಪಿ, ಆ.23: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ಕಾರು ಪಲ್ಟಿಯಾಗಿ ಓರ್ವ ಪ್ರಯಾಣಿಕ ಸಾವನಪ್ಪಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಕಾಪು ಠಾಣೆ ವ್ಯಾಪ್ತಿಯ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ಬೆಳ್ಮಣ್ ನಿವಾಸಿ ಮರ್ವಿನ್ ಮೆಂಡೋನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾ ಛಾಯಾಗ್ರಹಣ ಮಾಡುತ್ತಿದ್ದ ಮರ್ವಿನ್ ಡಿಜೆ ಸೌಂಡ್ಸ್ ವೃತ್ತಿಯನ್ನೂ ಮಾಡುತ್ತಿದ್ದರು. ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಗಾಯಗೊಂಡಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದಾಗ ಘಟನೆ ನಡೆದಿದ್ದು ನಾಯಿ ಅಡ್ಡ ಬಂತೆಂದು ದಿಢೀರ್ ಬ್ರೇಕ್ ತುಳಿದು ಪಲ್ಟಿಯಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದರಿಂದ ಒಳಗಿದ್ದವರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ತಕ್ಷಣ ಸ್ಥಳೀಯರು ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಒಂದು ದಿನ ಹಿಂದಷ್ಟೇ ಮರ್ವಿನ್ ಅವರು ತಮ್ಮ ಹೊಸ ಹಾಡನ್ನು ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಅದನ್ನು ಅವರು ಎಪಿಡಿ ಮ್ಯೂಸಿಕ್ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
D J Mervin, a 35-year-old cinematographer, tragically passed away in a car accident near Muloor while traveling from Udupi to Mangaluru with video editor Prajwal Suvarna, Prasad, Vignesh and an unidentified person. The incident occurred at around 3 am, when they swerved to avoid a street dog, causing their car to overturn.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm