ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm