ಬ್ರೇಕಿಂಗ್ ನ್ಯೂಸ್
26-08-25 10:36 am Mangalore Correspondent ಕರಾವಳಿ
ಬೆಳ್ತಂಗಡಿ, ಆ.26 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನನ್ನೇ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಆತನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆಯೇ, ಆರೋಪಿಗೆ ಆಶ್ರಯ ಕೊಟ್ಟಿರುವವರ ಮನೆಯನ್ನು ಪೊಲೀಸರು ಶೋಧಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿರುವ ಪೊಲೀಸರು ಆರೋಪಿಗೆ ಆಶ್ರಯ ನೀಡಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆಯೇ ದೂರುದಾರ ಕಂ ಆರೋಪಿ ಚಿನ್ನಯ್ಯನನ್ನು ಮಹೇಶ್ ಶೆಟ್ಟಿ ಅವರ ತಿಮರೋಡಿ ಗ್ರಾಮದ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆಶ್ರಯ ಕೊಟ್ಟ ಸಂದರ್ಭದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಿದ್ದಾರೆ. ಇದಕ್ಕಾಗಿ ಪುತ್ತೂರು, ಬೆಳ್ತಂಗಡಿಯಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಈ ವೇಳೆ, ಮಾಧ್ಯಮದವರನ್ನು ಎರಡು ಕಿಮೀ ದೂರದಲ್ಲೇ ತಡೆಯಲಾಗಿದೆ. ಧರ್ಮಸ್ಥಳ ತನಿಖೆ ಆರಂಭಗೊಂಡ ಸಂದರ್ಭದಲ್ಲಿ ಚಿನ್ನಯ್ಯನಿಗೆ ಮಹೇಶ್ ಶೆಟ್ಟಿ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು ಈ ಕಾರಣದಿಂದ ಎಸ್ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಆರೋಪಿ ಚಿನ್ನಯ್ಯನನ್ನು ಬಂಧಿಸಿದ್ದು ಸಂಪೂರ್ಣ ವಿಚಾರಣೆ ನಡೆಸಿದೆ. ಆಶ್ರಯ ಕೊಟ್ಟವರು ಯಾರು, ಷಡ್ಯಂತ್ರ ರೂಪಿಸಿದ್ದು ಯಾರು, ತಲೆಬುರುಡೆ ತಂದು ಕೊಟ್ಟಿದ್ದು ಯಾರು ಇತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆದಿದೆ.
ಇದರಂತೆ, ಎಸ್ಐಟಿ ತನಿಖೆ ಮುಂದುವರಿಯುವ ಸಾಧ್ಯತೆಗಳಿದ್ದು ಈ ಕಾರಣಕ್ಕೆ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟೆಣ್ಣನವರ್ ಸೇರಿದಂತೆ ಹೋರಾಟ ತಂಡದ ಸದಸ್ಯರನ್ನು ಪೊಲೀಸರು ಮತ್ತೆ ಬಂಧಿಸುವ ಸಾಧ್ಯತೆ ಅಲ್ಲಗಳೆಯಲಾಗದು.
In the Dharmasthala case, the SIT, which recently arrested the complainant Chinnayya and turned him into an accused, has now expanded its probe to those who allegedly sheltered him. Acting on a search warrant issued by the Beltangady court, SIT officials today raided the house of activist Mahesh Shetty of Timarodi, known for supporting Soujanya’s cause. This morning, the SIT brought accused Chinnayya to Mahesh Shetty’s residence and conducted a spot inspection
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm