ಬ್ರೇಕಿಂಗ್ ನ್ಯೂಸ್
29-08-25 03:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸಿದ್ದಾರೆ. ಆರೋಪಿ ಚಿನ್ನಯ್ಯ ಬರುತ್ತಿದ್ದ ಕಿಯಾ ಕಾರೆನ್ಸ್ ಕಾರಿನಲ್ಲಿ ಮಹೇಶ್ ಶೆಟ್ಟಿ ಬೆಳ್ತಂಗಡಿ ಠಾಣೆಗೆ ಬಂದಿದ್ದಾರೆ.
ಎರಡು ದಿನಗಳ ಹಿಂದೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಗೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದ ಮಹೇಶ್ ಶೆಟ್ಟಿ ಇಂದು ಏಕಾಏಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಒಂದು ಗಂಟೆ 10 ನಿಮಿಷ ಕಾಲ ವಿಚಾರಣೆ ಎದುರಿಸಿದ್ದು ಆಬಳಿಕ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಎಸ್ಐಟಿ ಠಾಣೆಗೆ ಬರಲು ಸೂಚನೆ ಇಲ್ಲದಿದ್ದರೂ, ಬೆಳ್ತಂಗಡಿ ಠಾಣೆ ಪಕ್ಕದಲ್ಲಿಯೇ ಇರುವ ಎಸ್ಐಟಿ ಕಚೇರಿಗೆ ತೆರಳಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಭೇಟಿಯಾಗಿದ್ದು ಕೆಲ ಹೊತ್ತಿನ ಬಳಿಕ ಅಲ್ಲಿಂದ ಹಿಂತಿರುಗಿದ್ದಾರೆ.


ಲಾಯರ್ ಜಗದೀಶ್ ಠಾಣೆಗೆ ಹಾಜರು
ಇದೇ ವೇಳೆ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಲಾಯರ್ ಜಗದೀಶ್ ಆಗಮಿಸಿದ್ದು ವಿಚಾರಣೆಗೆ ಹಾಜರಾಗಿದ್ದಾರೆ. ತನ್ನ ಫೇಸ್ ಬುಕ್ ಖಾತೆ ಮೂಲಕ ಪ್ರಚೋದನಕಾರಿ ಹೇಳಿಕೆ ಬಗ್ಗೆ ಬೆಳ್ತಂಗಡಿ ನಿವಾಸಿ ಪ್ರಭಾಕರ ಗೌಡ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಉತ್ಖನನ ಕಾರ್ಯಕ್ಕೆ ಸಂಬಂಧಿಸಿ ಜಗದೀಶ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ, ಸಾರ್ವಜನಿಕರಿಗೆ ಅಪರಾಧ ಎಸಗಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ಇದರಂತೆ, ಕಲಂ: 57 ಜೊತೆಗೆ 189(6), 191(3) ಬಿಎನ್ಎಸ್ 2023 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sajjanaya case activist Mahesh Shetty Timarodi appeared at the Beltangady Police Station on Thursday for questioning. He arrived in the Kia Carens vehicle belonging to accused Chinnayya. Two days earlier, SIT officials had visited Timarodi’s residence, after which he was reportedly untraceable. However, today he suddenly appeared at the station and underwent questioning for about 1 hour and 10 minutes.
14-12-25 03:19 pm
Bangalore Correspondent
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 05:33 pm
Udupi Correspondent
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm