ಬ್ರೇಕಿಂಗ್ ನ್ಯೂಸ್
30-08-25 11:01 pm Mangalore Correspondent ಕರಾವಳಿ
ಉಳ್ಳಾಲ, ಆ.30 : ಉಳ್ಳಾಲದಲ್ಲಿ 2002ನೇ ಇಸವಿಯಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲ ಯಶಸ್ಸಿನ ರೂವಾರಿ, ಖ್ಯಾತ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಉಳ್ಳಾಲ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷರಾದ ಗೋಪಾಲ ಗೋಳಿಯಡಿ(83)ಯವರು ಅಲ್ಪ ಕಾಲದ ಅಸೌಖ್ಯದಿಂದ ಉಳ್ಳಾಲ ಗೋಳಿಯಡಿಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ಗೋಪಾಲ ಗೋಳಿಯಡಿಯವರು 2002 ನೇ ಇಸವಿಯಲ್ಲಿ ಉಳ್ಳಾಲದಲ್ಲಿ ನಡೆದಿದ್ದ ಚಾರಿತ್ರಿಕ ನಾಗಮಂಡಲದ ಯಶಸ್ವಿಯ ರೂವಾರಿಗಳಾಗಿದ್ದರು. ಉಳ್ಳಾಲದ ಮಲರಾಯ ದೊಂಪದ ಬಲಿ ಉತ್ಸವ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಬ್ರಹ್ಮಕಲಶ, ವಿವಿಧ ಕ್ಷೇತ್ರಗಳ ಜೀರ್ಣೋದ್ಧಾರ ಸಮಿತಿ, ಶಾರದೋತ್ಸವ, ಗಣೇಶೋತ್ಸವ, ಊರ ಪರ ಊರಿನ ನಾಗಮಂಡಲ ಸೇವೆಗಳಲ್ಲಿ ಸಕ್ರಿಯರಾಗಿ ತೊಡಗಿಸಿದ್ದರು.
ಉಳ್ಳಾಲದ ಹಿಂದೂ ರುದ್ರಭೂಮಿ ನಿರ್ಮಾಣದ ಪೂರ್ವದಲ್ಲಿ ಅವರು ನೂರಾರು ಶವ ಸಂಸ್ಕಾರ ನಿರ್ವಹಣೆ ನಡೆಸಿದ್ದರು. ಬಿಲ್ಲವರ ಗೋಕರ್ಣನಾಥ ಸಂಘದ ಸಾಮಾಜಿಕ ಚಟುವಟಿಕೆಗಳಲ್ಲೂ ಅವರು ಸಕ್ರಿಯರಾಗಿದ್ದು ಆ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿದ್ದರು. ಗೋಪಾಲ ಗೋಳಿಯಡಿ ಅವರ ಅಗಲಿಕೆಗೆ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮಧರ್ಶಿಗಳಾದ ದೇವು ಮೂಲ್ಯಣ್ಣ, ಸ್ಪೀಕರ್ ಯು.ಟಿ.ಖಾದರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸೋಮೇಶ್ವರ ಪುರಸಭೆಯ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Renowned religious and social leader, Gopal Golyadi (83), who played a pivotal role in the success of the historic Nagamandala held in Ullal in 2002, passed away on Saturday at his residence in Golyadi, Ullal, following a brief illness.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm