ಬ್ರೇಕಿಂಗ್ ನ್ಯೂಸ್
01-09-25 10:01 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.1 : ಎಸ್ಐಟಿ ತನಿಖೆ, ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಅಪಚಾರ ಆಗಿದೆಯೆಂದು ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಮಾವೇಶ ಬೆನ್ನಲ್ಲೇ 12 ವರ್ಷಗಳ ಹಿಂದೆ ಕೊಲೆಯಾದ ಸೌಜನ್ಯಾ ಮನೆಗೆ ಭೇಟಿ ನೀಡಿ, ತಾಯಿ ಕುಸುಮಾವತಿ ಅವರಿಗೆ ಸಾಂತ್ವನ ಹೇಳಿದರು. ಅಲ್ಲದೆ, ಸೌಜನ್ಯಾ ಕೊಲೆ ಪ್ರಕರಣದ ತನಿಖೆಯಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸಂಜೆ 5 ಗಂಟೆಗೆ ಪಾಂಗಾಳದ ಸೌಜನ್ಯಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ, ಬಿಜೆಪಿ ನಾಯಕರ ಜೊತೆ ಮಾತನಾಡುತ್ತ ಕಣ್ಣೀರು ಹಾಕಿದ್ದಾರೆ. ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯಾ ಹೋರಾಟದಲ್ಲಿ ಜೊತೆಗಿರುವುದಾಗಿ ವಿಜಯೇಂದ್ರ ಭರವಸೆ ನೀಡಿದ್ದಾರೆ.



ಇದಕ್ಕು ಮುನ್ನ ಧರ್ಮಸ್ಥಳ ವಿರುದ್ಧದ ಪಿತೂರಿ ಮತ್ತು ಅಪಪ್ರಚಾರ ಅಭಿಯಾನವನ್ನು ಖಂಡಿಸಿ ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಶಾಸಕರು ಮತ್ತು ಹಲವು ನಾಯಕರು 'ಧರ್ಮಸ್ಥಳ ಚಲೋ' ಪ್ರತಿಭಟನೆ ನಡೆಸಿದ್ದಾರೆ. ಅದಕ್ಕು ಮೊದಲು, ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರಲ್ಲದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಜಾತಿ, ಧರ್ಮ ಲೆಕ್ಕಿಸದೆ ಎಲ್ಲರೂ ಸಿಬಿಐ ಅಥವಾ ಎನ್ಐಎಯಿಂದ ಸಮಗ್ರ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳ ಪ್ರಸಂಗದಲ್ಲಿ ಇದು ಅತ್ಯಗತ್ಯ. ಇದು ಧರ್ಮಸ್ಥಳದ ಮಂಜುನಾಥನ ಎಲ್ಲಾ ಭಕ್ತರ ಬೇಡಿಕೆಯಾಗಿದೆ ಎಂದು ವಿಜಯೇಂದ್ರ ಇದೇ ವೇಳೆ ಹೇಳಿದರು.
ಧರ್ಮಸ್ಥಳ ಪ್ರಕರಣದ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ ತನಿಖೆಗೆ ಆದೇಶಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.
Following the 'Dharmasthala Chalo' protest rally organized by the BJP, Karnataka BJP State President B.Y. Vijayendra visited the home of Soujanya, the young girl who was brutally murdered 12 years ago, and offered condolences to her mother, Kusumavati. He assured the grieving family that the BJP stands with them in their long struggle for justice.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am