ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆತ್ಮಹತ್ಯೆಗೆ ಶರಣಾದ ಅಮ್ಮ 

02-09-25 01:05 pm       Udupi Correspondent   ಕರಾವಳಿ

ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಉಡುಪಿ, ಸೆ 02 : ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದ ಥಾಣೆ ನಿವಾಸಿ ಲತಾ ಭಾಸ್ಕರ್(53) ಪತಿ ಭಾಸ್ಕ‌ರ್ ಅವರೊಂದಿಗೆ ವಾಸವಾಗಿದ್ದರು. ಆ.8ರಂದು ಬೆಳಗ್ಗೆ ಲತಾ ಕೆಲಸಕ್ಕೆ ಹೋಗಿ ಬರುವುದಾಗಿ ಪತಿಗೆ ತಿಳಿಸಿ ಹೋದವರು ವಾಪಸ್ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್ ಬರುತ್ತಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗದ್ದರಿಂದ ಮುಂಬೈನ ವೊಡವುಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆ.12ರಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಿಂದ ಪತಿ ಭಾಸ್ಕರ್‌ಗೆ ಕರೆ ಬಂದಿದ್ದು, ಲತಾ ಅವರು ವಿಷ ಪದಾರ್ಥ ಸೇವಿಸಿದ್ದು, ನಮ್ಮ ಆಸ್ಪತ್ರೆಯಲ್ಲಿ  ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅ.13ರಂದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆ.30ರಂದು ಮೃತಪಟ್ಟಿದ್ದಾರೆ. 

ಪುತ್ರ ಅಮಿತ್‌ಗೆ ಸರಿಯಾದ ಉದ್ಯೋಗ ಇಲ್ಲವೆಂದು ಮನನೊಂದು ವಿಷ ಸೇವಿಸಿದ್ದಾಳೆ ಎಂದು ಪತಿ ಭಾಸ್ಕ‌ರ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A 53-year-old woman who had reportedly consumed poison out of distress over her son’s unemployment has died while undergoing treatment at a hospital in Udupi. The deceased, Lata Bhaskar, was a resident of Thane, Maharashtra, and lived there with her husband Bhaskar.