ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm