ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm