ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm