ಬ್ರೇಕಿಂಗ್ ನ್ಯೂಸ್
06-09-25 04:46 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿ ನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕೂಡಲೇ ಒಂದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೆ, ನಮ್ಮ ಮಂಗಳೂರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
Following heavy rains in Mangaluru city, several roads under the Mangaluru City Corporation (MCC) limits have deteriorated severely, prompting MLA Vedavyas Kamath to direct civic officials to take immediate action to repair potholes and address related civic issues.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm