ಬ್ರೇಕಿಂಗ್ ನ್ಯೂಸ್
07-09-25 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm