ಬ್ರೇಕಿಂಗ್ ನ್ಯೂಸ್
07-09-25 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm