ಬ್ರೇಕಿಂಗ್ ನ್ಯೂಸ್
10-09-25 08:46 pm Mangalore Correspondent ಕರಾವಳಿ
ಮಂಗಳೂರು, ಸೆ.10: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ 'ಸ್ಕೈವಾಕರ್' ಸರ್ಜರಿ'ಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.
ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್ ನಲ್ಲಿ ಹತ್ತನೇ ಒಂದರಷ್ಟು ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ದೇಹ ರಚನೆಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ ಎಂದು ವಿವರಿಸಿದರು.
ಈ ಸೌಲಭ್ಯದಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯ ವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು- ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಸಾಮರ್ಥ್ಯವನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ ಎಂದು ಹೇಳಿದರು.
ಯೆನೆಪೋಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ.ದೀಪಕ್ ರೈ ಅವರು ಭಾರತದ ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೋಯದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದು, ಈ ವ್ಯವಸ್ಥೆಯು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ ಎಂದು ವಿವರಿಸಿದರು.
Yenepoya Multi-Specialty Hospital in Mangaluru has become the first hospital in South Asia to introduce the revolutionary ortho-robotic surgical system Skywalker for knee replacement surgeries. The advanced system, seen as a game-changer in orthopedic surgery, was launched in collaboration with the U.S
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm