ಬ್ರೇಕಿಂಗ್ ನ್ಯೂಸ್
10-09-25 08:46 pm Mangalore Correspondent ಕರಾವಳಿ
ಮಂಗಳೂರು, ಸೆ.10: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ 'ಸ್ಕೈವಾಕರ್' ಸರ್ಜರಿ'ಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.
ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್ ನಲ್ಲಿ ಹತ್ತನೇ ಒಂದರಷ್ಟು ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ದೇಹ ರಚನೆಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ ಎಂದು ವಿವರಿಸಿದರು.
ಈ ಸೌಲಭ್ಯದಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯ ವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು- ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಸಾಮರ್ಥ್ಯವನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ ಎಂದು ಹೇಳಿದರು.
ಯೆನೆಪೋಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ.ದೀಪಕ್ ರೈ ಅವರು ಭಾರತದ ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೋಯದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದು, ಈ ವ್ಯವಸ್ಥೆಯು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ ಎಂದು ವಿವರಿಸಿದರು.
Yenepoya Multi-Specialty Hospital in Mangaluru has become the first hospital in South Asia to introduce the revolutionary ortho-robotic surgical system Skywalker for knee replacement surgeries. The advanced system, seen as a game-changer in orthopedic surgery, was launched in collaboration with the U.S
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm