ಬ್ರೇಕಿಂಗ್ ನ್ಯೂಸ್
10-09-25 08:46 pm Mangalore Correspondent ಕರಾವಳಿ
ಮಂಗಳೂರು, ಸೆ.10: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ 'ಸ್ಕೈವಾಕರ್' ಸರ್ಜರಿ'ಯನ್ನು ಮಂಗಳೂರಿನ ಯೆನೆಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ. ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ.
ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಸರ್ಜರಿ ವ್ಯವಸ್ಥೆಯನ್ನು ಯೆನೆಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ಮತ್ತು ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ದಕ್ಷಿಣ ಏಷ್ಯಾ ವಿಭಾಗದ ಹಿರಿಯ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಡಾ.ಮುಕೇಶ್ ಪಾರ್ಮರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ ರೊಬೊಟಿಕ್ ಸರ್ಜರಿ ತಂತ್ರಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಮಿಲಿಮೀಟರ್ ನಲ್ಲಿ ಹತ್ತನೇ ಒಂದರಷ್ಟು ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ದೇಹ ರಚನೆಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ ಎಂದು ವಿವರಿಸಿದರು.
ಈ ಸೌಲಭ್ಯದಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯ ವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು- ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಸಾಮರ್ಥ್ಯವನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ ಎಂದು ಹೇಳಿದರು.
ಯೆನೆಪೋಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ.ದೀಪಕ್ ರೈ ಅವರು ಭಾರತದ ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೋಯದಲ್ಲಿ ಯಶಸ್ವಿಯಾಗಿ ನೆರವೇರಿಸಿದ್ದು, ಈ ವ್ಯವಸ್ಥೆಯು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ ಎಂದು ವಿವರಿಸಿದರು.
Yenepoya Multi-Specialty Hospital in Mangaluru has become the first hospital in South Asia to introduce the revolutionary ortho-robotic surgical system Skywalker for knee replacement surgeries. The advanced system, seen as a game-changer in orthopedic surgery, was launched in collaboration with the U.S
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm