ಬ್ರೇಕಿಂಗ್ ನ್ಯೂಸ್
11-09-25 10:42 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.11: ಧರ್ಮಸ್ಥಳ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ಹೆಣಗಳ ಅವಶೇಷ ನೋಡಿದ್ದೇನೆ, ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ಹೋದ ವೇಳೆ ಬಹಳಷ್ಟು ಹೆಣಗಳ ಅವಶೇಷ ನೋಡಲು ಸಿಕ್ಕಿದೆ, ಅವನ್ನು ಅಧಿಕಾರಿಗಳು ಇನ್ನೂ ಸಂಗ್ರಹ ಮಾಡಿಲ್ಲ ಎಂದು ಸೌಜನ್ಯಾ ಮಾವ ವಿಠಲ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ದೂರುದಾರ ನೀಡಿರುವ ತಲೆಬುರುಡೆಯ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸೆ.6ರಂದು ಮತ್ತು 9ರಂದು ವಿಠಲ ಗೌಡ ಅವರನ್ನು ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಈ ವೇಳೆ, ಅಲ್ಲಿ ಮತ್ತಷ್ಟು ಹೆಣದ ಅವಶೇಷಗಳು ಪತ್ತೆಯಾಗಿದ್ದವು ಎನ್ನುವ ಸುದ್ದಿ ಹರಡಿತ್ತು. ಆದರೆ ಅಲ್ಲಿ ಮತ್ತಷ್ಟು ಶೋಧ ಕಾರ್ಯಾಚರಣೆಗೆ ನಡೆದಿರಲಿಲ್ಲ. ಆದರೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಭದ್ರತೆ ಒದಗಿಸಲಾಗಿದೆ.
ಇದೀಗ ಹೋರಾಟಗಾರರ ಕಡೆಯಿಂದ ವಿಠಲ ಗೌಡರ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಬಂಗ್ಲೆಗುಡ್ಡೆ ಕಾಡಿಗೆ ಎರಡು ಬಾರಿ ಹೋದಾಗಲೂ ಹೆಣಗಳ ರಾಶಿಯನ್ನು ಕಂಡಿದ್ದೇನೆ. ಹತ್ತು ಅಡಿ ಅಂತರದಲ್ಲಿಯೇ ಅವಶೇಷಗಳು ಪತ್ತೆಯಾಗಿವೆ. ಎರಡನೇ ಬಾರಿ ಮಹಜರು ಹೋಗಿದ್ದ ವೇಳೆ ಬಹಳಷ್ಟು ಹೆಣಗಳ ಎಲುಬುಗಳು ಪತ್ತೆಯಾಗಿವೆ. ಸಣ್ಣ ಮಗುವಿನ ರೀತಿಯ ಅವಶೇಷವೂ ಕಾಣಸಿಕ್ಕಿದೆ ಎಂದು ಹೇಳಿದ್ದಾರೆ.
ಮೇಲ್ನೋಟಕ್ಕೆ ಅಲ್ಲಿ ವಾಮಾಚಾರಕ್ಕೆ ಬಳಸಿರುವ ವಸ್ತುಗಳು ಕೂಡ ಕಂಡುಬಂದಿವೆ. ಅವಶೇಷಗಳು ಕಾಣದಂತೆ ಮಾಡಲು ಮಣ್ಣು ಹಾಕಿರುವಂತೆ ಇದೆ. ಎಲುಬಿನ ಅವಶೇಷಗಳು ಅಲ್ಲಲ್ಲಿ ಬಿದ್ದುಕೊಂಡಿವೆ. ಕೆಲವು ಕಡೆ ತಲುಬುರುಡೆಗಳು ಕಾಣಸಿಕ್ಕಿವೆ. ಒಂದೇ ಕಡೆ ಮೂರು ತಲೆಬುರುಡೆಯೂ ಇರುವುದನ್ನು ಕಂಡಿದ್ದೇನೆ ಎಂದು ವಿಠಲ ಗೌಡ ಹೇಳಿಕೆ ನೀಡಿದ್ದಾರೆ.
ಸದ್ಯಕ್ಕೆ ಎಸ್ಐಟಿ ಅಧಿಕಾರಿಗಳು ಯೂಟ್ಯೂಬರ್ ಗಳನ್ನು ಮತ್ತು ಅಲ್ಲಿನ ಹೋರಾಟಗಾರರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ತಲೆಬುರುಡೆಯನ್ನು ಇದೇ ಬಂಗ್ಲೆಗುಡ್ಡೆ ಕಾಡಿನಿಂದ ವಿಠಲ ಗೌಡ ದೂರುದಾರ ಚಿನ್ನಯ್ಯನಿಗೆ ತಂದುಕೊಟ್ಟಿದ್ದಾಗಿ ಹೇಳಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ವಿಠಲ ಗೌಡರನ್ನು ಎಸ್ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಲ್ಲದೆ, ಬಂಗ್ಲೆಗುಡ್ಡೆ ಕಾಡಿಗೆ ಕರೆದೊಯ್ದು ಮಹಜರು ನಡೆಸಿದ್ದರು. ಆದರೆ ಈ ವೇಳೆ ಮತ್ತಷ್ಟು ಶವದ ಸಾಕ್ಷ್ಯಗಳು ಪತ್ತೆಯಾಗಿದ್ದರಿಂದ ಅಧಿಕಾರಿಗಳು ಕೂಡ ದಂಗಾಗಿದ್ದಾರೆ ಎನ್ನುವ ಮಾಹಿತಿ ಇದೆ.
ಇದೇ ವೇಳೆ, ಬುಧವಾರ ಅಧಿಕಾರಿಗಳ ತಂಡವು ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಅಲ್ಲಿಂದ ಅಸಹಜ ಸಾವುಗಳ ಕುರಿತ ದಾಖಲೆಗಳನ್ನು ಪಡೆದುಕೊಂಡಿದೆ. ಇತ್ತೀಚೆಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯು ಗ್ರಾಪಂನಿಂದ ಆರ್ಟಿಐನಡಿ ಪಡೆದ ದಾಖಲೆಯಲ್ಲಿ 279 ಅಸಹಜ ಸಾವುಗಳ ಬಗ್ಗೆ ಮಾಹಿತಿ ನೀಡಿತ್ತು. ಇದಕ್ಕೆ ಪೂರಕವಾಗಿ ಗ್ರಾಪಂ ಮಾಜಿ ಅಧ್ಯಕ್ಷರು ಕೂಡ ನಾವು ಅನೇಕ ಅಸಹಜ ಸಾವುಗಳ ಹೆಣಗಳನ್ನು ಹೂತು ಹಾಕಿದ್ದೆವು ಎಂದು ಹೇಳಿಕೆ ನೀಡಿದ್ದರು.
In a shocking revelation, Vittal Gowda, uncle of deceased Soujanya, has claimed that he personally saw piles of human remains, including skulls and bones, in the Banglegudde forest near Dharmasthala Snanaghatta, while being taken there by SIT officials for investigation.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm