ಬ್ರೇಕಿಂಗ್ ನ್ಯೂಸ್
12-09-25 11:32 am Mangalore Correspondent ಕರಾವಳಿ
ಮಂಗಳೂರು, ಸೆ.12 : ಗುಂಡಿ ಬಿದ್ದ ಹೆದ್ದಾರಿಗಳಿಗೆ ತುರ್ತಾಗಿ ಕಾಯಕಲ್ಪ ನೀಡಲು ಸಂಸದ ಬ್ರಿಜೇಶ್ ಚೌಟ ಮುಂದಾಗಿದ್ದು, ತುರ್ತು ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಸುರತ್ಕಲ್- ಬಿಸಿ ರೋಡ್ ನಡುವಿನ 33 ಕಿಮೀ ಉದ್ದದ ಹೆದ್ದಾರಿಯನ್ನು ಸಂಪೂರ್ಣ ಮರು ಡಾಮರೀಕರಣ, ಸರ್ವಿಸ್ ರಸ್ತೆ, ಆಯಕಟ್ಟಿನ ಜಂಕ್ಷನ್ ಇರುವಲ್ಲಿ ತಿರುವುಗಳನ್ನು ಸರಿಪಡಿಸುವ ಕಾರ್ಯಕ್ಕೆ 28 ಕೋಟಿ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಆಗಿದೆ. ಮಳೆಯ ಕಾರಣಕ್ಕೆ ಕಾಮಗಾರಿ ವಿಳಂಬ ಆಗಿತ್ತು. ತಕ್ಷಣವೇ ಕೆಲಸ ಕೈಗೆತ್ತಿಕೊಂಡು ಆರು ತಿಂಗಳಲ್ಲಿ ಮುಗಿಸುವಂತೆ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
ಹೆದ್ದಾರಿ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಟ್ಟಿನಲ್ಲಿ ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಜೊತೆಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆಗೆ ಸಂಸದ ಚೌಟ ಸಭೆ ನಡೆಸಿದ್ದು, ಹೆದ್ದಾರಿ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಜಾವೇದ್ ಅಜ್ಮಿ, ಮಹಾನಗರ ಪಾಲಿಕೆ ಎಂಜಿನಿಯರ್ ನರೇಶ್ ಶೆಣೈ, ಮಂಗಳೂರು ನಗರ ಸಂಚಾರ ವಿಭಾಗದ ಎಸಿಪಿ ಶ್ರೀಮತಿ ನಜ್ಮಾ ಫಾರೂಕಿ, ಗುತ್ತಿಗೆದಾರ ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಈಗಾಗಲೇ ಸುರತ್ಕಲ್ – ಬಿಸಿ ರೋಡ್ ಹೆದ್ದಾರಿಯನ್ನು ಎನ್ಎಂಪಿಟಿಯಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಪಡೆದುಕೊಳ್ಳಲು ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಬೇಡಿಕೆ ಇಟ್ಟಿದ್ದು, ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರ ಜೊತೆಗೆ ಈ ಹೆದ್ದಾರಿ ಅತಿ ಹೆಚ್ಚು ವಾಹನಗಳು ಸಂಚರಿಸುವ ರಸ್ತೆಯಾಗಿರುವುದು ಮತ್ತು ಏರ್ಪೋರ್ಟ್, ಬಂದರು ಸಂಪರ್ಕದ ರಸ್ತೆಯಾಗಿದ್ದರಿಂದ ಇದಕ್ಕೊಂದು ಬೈಪಾಸ್ ರಸ್ತೆ ಮಾಡುವುದು ಹಾಗೂ ಒಟ್ಟು ಈ ರಸ್ತೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಇಲಾಖೆ ಸಚಿವರಿಗೆ ಮನವಿ ನೀಡಿದ್ದೇನೆ. ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು, ವಿಸ್ತೃತ ಯೋಜನಾ ವರದಿ ತಯಾರಿಸಲು ಅನುಮತಿ ದೊರೆತಿದೆ. ಸದ್ಯಕ್ಕೆ ತುರ್ತಾಗಿ ದುರಸ್ತಿ ಕಾರ್ಯ, ಆಬಳಿಕ ಈ ಹೆದ್ದಾರಿಯ ಉದ್ದಕ್ಕೂ ಅಗತ್ಯ ಇರುವಲ್ಲಿ ಸರ್ವಿಸ್ ರಸ್ತೆ ಮತ್ತು ಹೆಚ್ಚು ಗುಂಡಿ ಬೀಳುವಲ್ಲಿ ಕಾಂಕ್ರೀಟ್ ಹಾಕಿ, ಪೊಲೀಸರು ಮತ್ತು ಹೆದ್ದಾರಿ ಪ್ರಾಧಿಕಾರ ಸಮನ್ವಯದಿಂದ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಚೌಟ ಸೂಚಿಸಿದರು.
ನಂತೂರು ವೃತ್ತದಲ್ಲಿ ಸಿಗ್ನಲ್ ವ್ಯವಸ್ಥೆ ಮಾಡಲು ಯಾಕೆ ಸಾಧ್ಯವಾಗಲ್ಲ ಎಂದು ಟ್ರಾಫಿಕ್ ಎಸಿಪಿ ಅವರಲ್ಲಿ ಸಂಸದ ಚೌಟ ಪ್ರಶ್ನೆ ಮಾಡಿದರು. ನಂತೂರು ವೃತ್ತ ಏರು ತಗ್ಗು ಇರುವುದರಿಂದ ಸಿಗ್ನಲ್ ವ್ಯವಸ್ಥೆ ಪೂರಕವಾಗಿಲ್ಲ. ವಾಹನಗಳು ಸರಾಗ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಹೇಳಿದರು. ವೇದವ್ಯಾಸ್ ಪ್ರತಿಕ್ರಿಯಿಸಿ, ಕೆಲವು ನಗರಗಳಲ್ಲಿ ಐದು ರಸ್ತೆ ಒಂದೇ ಕಡೆ ಸೇರುವುದಿದ್ದರೂ ಸಿಗ್ನಲ್ ವ್ಯವಸ್ಥೆ ಇರುತ್ತದೆ. ಇದನ್ನು ಯಾಕೆ ಆ ರೀತಿ ಮಾಡಲಾಗದು ಎಂದು ಪ್ರಶ್ನಿಸಿದರು.
ಹೆದ್ದಾರಿ ಬದಿಯಲ್ಲಿ ಗೂಡಂಗಡಿ, ಮೀನು ಮಾರಾಟಕ್ಕೆ ಅವಕಾಶ ನೀಡಬಾರದು, ಇದರಿಂದ ಟ್ರಾಫಿಕ್ ತೊಂದರೆಯಾಗುತ್ತದೆ ಎಂದು ಸಂಸದರು ಪೊಲೀಸರಿಗೆ ಸೂಚನೆ ನೀಡಿದರು. ಇದಕ್ಕೆ ಶಾಸಕ ಕಾಮತ್, ಹೆದ್ದಾರಿ ಬದಿಯಲ್ಲಿ ಯಾವುದೇ ರೀತಿ ಅತಿಕ್ರಮ ಇದ್ದರೂ ಪಾಲಿಕೆಯಲ್ಲಿ ಮಾಡಿದ ರೀತಿ ಟೈಗರ್ ಕಾರ್ಯಾಚರಣೆ ನಡೆಸಿ, ಪೊಲೀಸರನ್ನು ಜೊತೆಗೆ ಸೇರಿಸಿಕೊಂಡು ಈ ಕೆಲಸ ಮಾಡುವಂತೆ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.
To address the worsening condition of highways in Dakshina Kannada, MP Brijesh Chowta has directed officials to immediately take up urgent repair works and complete them within six months.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:19 pm
Mangalore Correspondent
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm