ಬ್ರೇಕಿಂಗ್ ನ್ಯೂಸ್
12-09-25 08:53 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.12 : ಧರ್ಮಸ್ಥಳ ವಿರುದ್ಧ ಅವಹೇಳನ ಮಾಡಿದ್ದಾಗಿ ದೂರು ದಾಖಲಾಗಿ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ಎದುರಿಸಿದ್ದ ಯೂಟ್ಯೂಬರ್ ಸಮೀರ್ ಎಂಡಿ ಮತ್ತೆ ವಿಡಿಯೋ ಮಾಡಿದ್ದು ನನಗೆ ವಿದೇಶದಿಂದ ಫಂಡ್ ಬಂದಿದೆ ಎಂದು ಆರೋಪ ಮಾಡುತ್ತಿದ್ದಾರೆ. ನನಗೆ ಯಾವುದೇ ಫಂಡ್ ಬಂದಿಲ್ಲ. ಹಣ ತಗೊಂಡಿದ್ದಿದ್ರೆ ತನಿಖೆಯಿಂದ ಎಲ್ಲಾ ಹೊರಗೆ ಬರ್ತಿತ್ತು. ಪೊಲೀಸರಿಗೆ ಎಲ್ಲಾ ಬ್ಯಾಂಕ್ ದಾಖಲೆ ನೀಡಿದ್ದೇನೆ. ಪೊಲೀಸರು ತನಿಖೆ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡುವವರನ್ನ ಯಾರೂ ಪ್ರಶ್ನೆ ಮಾಡಲ್ಲ ಎಂದು ನೋವು ಹೇಳಿಕೊಂಡಿದ್ದಾರೆ.
ಸುಜಾತ ಭಟ್ ಬಗ್ಗೆ ವಿಡಿಯೋ ಮಾಡಿರುವ ವಿಚಾರದಲ್ಲಿ ಪ್ರತಿಕ್ರಿಯಿಸುತ್ತ ಆ ತಾಯಿಯ ಕಣ್ಣೀರನ್ನ ನೋಡಿ ವಿಡಿಯೋ ಮಾಡಿದ್ದೆ. ಸುಜಾತ ಭಟ್ ಇಂಟರ್ವ್ಯೂನಲ್ಲಿ ಕಣ್ಣೀರು ಹಾಕಿದ್ದನ್ನು ನೋಡಿ ವಿಡಿಯೋ ಮಾಡಿದ್ದೆ. ಈಗ ಆ ಕಣ್ಣೀರೇ ಸುಳ್ಳು ಅಂದ್ರೆ ನಾನು ಏನು ಮಾಡಲಿ? ನನ್ನ ವಿಡಿಯೋ ಸುಳ್ಳು ಅಂತ ಹೇಳುತ್ತಿದ್ದಾರೆ. ಪೊಲೀಸರ ಯುಡಿಆರ್ ರಿಪೋರ್ಟ್ ಸುಳ್ಳಾ? ಸೌಜನ್ಯಾ, ಪದ್ಮಾಲತಾರನ್ನ ಸಾಯಿಸಿದ್ದು ಸುಳ್ಳಾ ಎಂದು ಪ್ರಶ್ನೆ ಮಾಡಿದ್ದಾರೆ.
ಯಾವಾಗಲೂ ಸ್ಟುಡಿಯೋದಲ್ಲಿ ಕ್ಯಾಮರಾ ಮುಂದೆ ಕೂತ್ಕೊಂಡು ವಿಡಿಯೋ ಮಾಡ್ತಿದ್ದೆ. ಇವತ್ತು ಕಾರಲ್ಲಿ ಕೂತ್ಕೊಂಡು ವಿಡಿಯೋ ಮಾಡ್ತಿದ್ದೇನೆ. ಪ್ರಾಮಾಣಿಕವಾಗಿ ನಾನು ಹೇಳ್ತಿದ್ದೇನೆ. ಇವತ್ತು ನನಗೆ ಮನೆ ಇಲ್ಲ. ಯಾವುದೋ ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ಇದ್ವಿ. ಪೊಲೀಸರು ತನಿಖೆಗೆ ಅಂತ ಮನೆಗೆ ಬಂದು ಶೋಧ ಮಾಡಿದ್ದಾರೆ. ಅದಾದ ನಂತರ ಮನೆಯ ಓನರ್ ನಮ್ಮನ್ನ ಮನೆಯಿಂದ ಖಾಲಿ ಮಾಡಿಸಿದ್ದಾರೆ. ಇವತ್ತು ಸಮೀರ್ ಎಂಡಿ ಅಂದರೆ ಯಾರೂ ಮನೆ ಕೊಡ್ತಿಲ್ಲ. ಇವರಿಂದಾಗಿ ಸಮೀರ್ ಎಂಡಿ ಅಂದರೆ ಜನ ಹೆದರಿಕೊಳ್ತಿದ್ದಾರೆ. ಕಳೆದು ಒಂದು ತಿಂಗಳಿನಿಂದ ನಾನು ನನ್ನ ತಾಯಿ, ಅಲೆದಾಡುತ್ತಿದ್ದೇವೆ ಎಂದಿದ್ದಾರೆ.
ಇಲ್ಲಿ ಗಟ್ಟಿಯಾಗಿ ನ್ಯಾಯದ ಪರ ನಿಂತರೆ ಎಲ್ಲರಿಗೂ ಇದೇ ಪರಿಸ್ಥಿತಿ ಬರುತ್ತದೆ. ನಾನು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡಿದ್ದೀನಿ. ಹೆಣ್ಮಕ್ಕಳಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಸಿಗಲಿ ಎಂದು ಶಕ್ತಿ ಮೀರಿ ಪ್ರಯತ್ನ ಪಟ್ಟಿದ್ದೀನಿ. ಎಸ್ಐಟಿ ರಚನೆ ಆದಾಗಲೇ ಅರ್ಧ ಕೆಲಸ ಆಗಿದೆ. ಎಸ್ಐಟಿ ಇದೆ, ಆ ದೇವರು ಇದ್ದಾರೆ ಅಂತ ಹೇಳಿಕೆ ನೀಡಿದ್ದಾರೆ.
YouTuber Sameer MD, who has been under fire for posting critical videos related to Dharmasthala, has now emotionally responded to allegations that he received foreign funding for his activism. Speaking in a new video, Sameer stated that he has submitted all his bank documents to the police and has nothing to hide.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:19 pm
Mangalore Correspondent
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm