ಬ್ರೇಕಿಂಗ್ ನ್ಯೂಸ್
13-09-25 11:05 pm Udupi Correspondent ಕರಾವಳಿ
ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಶ್ರೇಯಸ್ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ.
ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್ಒ ಗಣಪತಿ, ಆರ್ಎಫ್ಒ ಜ್ಯೋತಿ ಮೊದಲಾದವರು ಶ್ರೇಯಸ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident near Tarekudlu on the Kamalashile–Siddapura main road, a samba deer collided with a moving motorcycle, resulting in the death of a 22-year-old youth and serious injuries to his friend. The duo was returning from a visit to the Kamalashile temple when the accident occurred.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 08:19 pm
Mangalore Correspondent
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm