ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm