ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm