ಬ್ರೇಕಿಂಗ್ ನ್ಯೂಸ್
18-09-25 11:11 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.18 : ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ನಿನ್ನೆ ಅಸ್ಥಿಪಂಜರದ ಜೊತೆಗೆ ಐಡಿ ಕಾರ್ಡ್ ಒಂದು ಸಿಕ್ಕಿತ್ತು. ಅದರ ಮೂಲ ಪತ್ತೆಹಚ್ಚಿದಾಗ, ಅದು ಕೊಡಗು ಜಿಲ್ಲೆಯ ಪೊನ್ನಂಪೇಟೆಯ ವೃದ್ಧ ಯು.ಬಿ.ಅಯ್ಯಪ್ಪ ಎಂಬವರದ್ದು ಎಂದು ಪತ್ತೆಯಾಗಿದೆ.
ಏಳು ವರ್ಷಗಳ ಹಿಂದೆ ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದವರು ನಾಪತ್ತೆಯಾಗಿರುವ ಕುರಿತು ಶ್ರೀಮಂಗಲದ ಕುಟ್ಟ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಹೀಗಾಗಿ ಸಿಕ್ಕ ಅಸ್ಥಿಪಂಜರ ಸಹ ಅಯ್ಯಪ್ಪನವರದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಅವರ ಪುತ್ರ ಜೀವನ್ ನೀಡಿದ ದೂರಿನಂತೆ 15-06-2017ರಂದು ಕುಟ್ಟ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆಸ್ಪತ್ರೆಗೆಂದು ಬೆಳಗ್ಗೆ 6 ಗಂಟೆಗೆ ಮನೆಯಿಂದ ತೆರಳಿದ್ದ ಅಯ್ಯಪ್ಪ ನಾಪತ್ತೆಯಾಗಿದ್ದರು. ಅದೇ ದಿನ ಬೆಳಗ್ಗೆ 11.30ರ ನಂತರ ಮೊಬೈಲ್ ಸ್ವಿಚ್ ಅಫ್ ಆಗಿತ್ತು. ಬಳಿಕ ಇವರ ಕುಟುಂಬ ಒಂದು ವಾರ ಕಾಲ ಹುಡುಕಾಡಿತ್ತು. ಕೊನೆಗೆ ಅಯ್ಯಪ್ಪ ಸುಳಿವು ಸಿಗದಿದ್ದಾಗ ಜೀವನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದರೂ ಅಯ್ಯಪ್ಪ ಅವರ ಸುಳಿವು ಸಿಕ್ಕಿರಲಿಲ್ಲ. ಇದೀಗ ಎಂಟು ವರ್ಷಗಳ ಬಳಿಕ ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಯ್ಯಪ್ಪ ಅವರ ಐಡಿ ಕಾರ್ಡ್ ಪತ್ತೆಯಾಗಿದೆ. ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರ ಇವರದ್ದೇನಾ ಎಂಬ ಬಗ್ಗೆ ಸಂಬಂಧಿಕರ ಜೊತೆಗೆ ಡಿಎನ್ಎ ಮಾಡಿದರಷ್ಟೇ ತಿಳಿಯಬಹುದಾಗಿದೆ. ಗುರುವಾರ ಇಡೀ ದಿನ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ನಡೆದಿದ್ದು ಮತ್ತಷ್ಟು ಅಸ್ಥಿಪಂಜರಗಳು ಸಿಕ್ಕಿವೆ.
ಪ್ರಥಮ ಹಂತದಲ್ಲಿ ದೂರುದಾರ ಚಿನ್ನಯ್ಯನ ಉಪಸ್ಥಿತಿಯಲ್ಲಿ ಬಂಗ್ಲೆಗುಡ್ಡೆ ಪರಿಸರ ಸೇರಿ 17 ಸ್ಥಳಗಳಲ್ಲಿ ಹೊಂಡಗಳನ್ನು ತೋಡಿ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ ಆಗ ಹೆಚ್ಚಿನ ಸಾಕ್ಷ್ಯ ಸಿಕ್ಕಿರಲಿಲ್ಲ. ಈಗ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತನಿಖೆ ನಡೆಸಿದಾಗ ಹಲವು ಕಡೆ ಶವಗಳ ಅವಶೇಷ ಪತ್ತೆಯಾಗಿದೆ.
ಸುಜಾತ ಭಟ್ ಪ್ರಕರಣದಲ್ಲಿ ವಿಜಯ್ ಹೇಳಿಕೆ
ಇದೇ ವೇಳೆ, ತನ್ನ ಮಗಳು ಅನನ್ಯಾ ಕಾಣೆಯಾಗಿದ್ದಾರೆಂದು ಹೇಳಿ ಯುವತಿಯೊಬ್ಬಳ ಫೋಟೊ ತೋರಿಸಿದ್ದ ಸುಜಾತಾ ಭಟ್ ಪ್ರಕರಣದಲ್ಲಿ, ಆ ಫೋಟೊದಲ್ಲಿದ್ದ ಕೊಡಗು ಮೂಲದ ಯುವತಿ ವಾಸಂತಿಯ ಸೋದರ ವಿಜಯ್ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ಹೇಳಿಕೆ ನೀಡಿದ್ದಾರೆ. ಸುಜಾತಾ ಭಟ್ ಬೆಂಗಳೂರಿನ ವಾಸಂತಿ ಎಂಬವರ ಫೋಟೋವನ್ನು ಅನನ್ಯಾ ಭಟ್ ಎಂದು ಬಿಂಬಿಸಿ ಮಾಧ್ಯಮಗಳಿಗೆ ತೋರಿಸಿದ್ದರು. ಆದರೆ ವಾಸಂತಿ ಅವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಆಕೆಯ ಸೋದರ ಕೊಡಗು ಮೂಲದ ವಿಜಯ್ ಹೇಳಿಕೆ ನೀಡಿದ್ದರು. ಇದೀಗ ಗುರುವಾರ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
A skeleton was discovered in the Banglegudde forest near the Netravathi bathing ghat on Wednesday, along with an ID card that police traced back to U.B. Aiyappa, an elderly resident of Ponnampet in Kodagu district.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm