ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm