ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm