Mangalore, Heart Attack: ಪ್ರತ್ಯೇಕ ಪ್ರಕರಣ ; ಮೂಡುಬಿದ್ರೆ ವ್ಯಾಪ್ತಿಯ ಇಬ್ಬರು ಹೃದಯಾಘಾತಕ್ಕೆ ಬಲಿ 

20-09-25 02:31 pm       Mangalore Correspondent   ಕರಾವಳಿ

ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಮೂಡುಬಿದಿರೆ ವ್ಯಾಪ್ತಿಯ ಒಬ್ಬ ಯುವಕ ಮತ್ತು ಇನ್ನೊಬ್ಬ ಯುವತಿ ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 

ಮಂಗಳೂರು, ಸೆ.20: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಮೂಡುಬಿದಿರೆ ವ್ಯಾಪ್ತಿಯ ಒಬ್ಬ ಯುವಕ ಮತ್ತು ಇನ್ನೊಬ್ಬ ಯುವತಿ ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 

ಮೂಡುಬಿದಿರೆ ಮಿಜಾರು ಬಳಿಯ ಕೊಪ್ಪದಕುಮೇರು ನಿವಾಸಿ ಶರತ್(26) ಗುರುವಾರ ಅಡುಗೆ ಕೆಲಸಕ್ಕೆಂದು ಭಟ್ಕಳಕ್ಕೆ ತೆರಳಿದ್ದರು. ಅಲ್ಲಿ ಕೆಲಸದಲ್ಲಿ ತೊಡಗಿರುವಾಗಲೇ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 

ಇನ್ನೊಂದು ಪ್ರಕರಣದಲ್ಲಿ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿರುವ ಟ್ರಾವೆಲ್ಸ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ 24 ವರ್ಷದ ಮಹಿಳೆ ಹೃದಯಾಘಾತದಿಂದ ಸಾವು ಕಂಡಿದ್ದಾರೆ. ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫರ್ನಾಂಡಿಸ್‌ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ(24) ಮೃತರು. ಇವರು ಮಂಗಳೂರಿನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಸಾವಿಗೀಡಾಗಿದ್ದಾರೆ.

In two separate tragic incidents reported on the same day, a young man and a young woman from the Moodbidri region succumbed to heart attacks. In the first case, Sharath (26), a resident of Koppadakumera near Mijar, Moodbidri, had traveled to Bhatkal on Thursday for a cooking job. While at work, he reportedly suffered a sudden heart attack and collapsed, leading to his untimely death.