ಬ್ರೇಕಿಂಗ್ ನ್ಯೂಸ್
20-09-25 08:46 pm Mangalore Correspondent ಕರಾವಳಿ
ಉಳ್ಳಾಲ, ಸೆ.20 : ಸೋಮೇಶ್ವರದ ಕಡಲ ಕಿನಾರೆಯಲ್ಲಿ ಕುಂಪಲದ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಖಾಸಗಿ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಕುಂಪಲ ಚೇತನ ನಗರ ನಿವಾಸಿ ವಿನೋದ್ ಕುಂಪಲ(49) ಎಂಬವರ ಮೃತದೇಹ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ಮುಂಜಾನೆ ಪತ್ತೆಯಾಗಿದೆ. ವಿನೋದ್ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಟ ಅವರು ಕೆಲಸಕ್ಕೂ ತೆರಳದೆ ರಾತ್ರಿ ಮನೆಗೂ ಮರಳದೆ ನಾಪತ್ತೆಯಾಗಿದ್ದರು.
ಶನಿವಾರ ಮುಂಜಾನೆ ಸೋಮೇಶ್ವರ ಪುರಸಭಾ ಕಚೇರಿ ಬಳಿಯ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಶವದ ಗುರುತು ಪತ್ತೆಹಚ್ಚಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ವಿನೋದ್ ಅವರು ಖಾಸಗಿ ಫೈನಾನ್ಸ್ ಒಂದರಿಂದ ಮಕ್ಕಳ ಶಿಕ್ಷಣಕ್ಕಾಗಿ ಸಾಲ ಪಡೆದಿದ್ದು, ಫೈನಾನ್ಸ್ ನವರ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೈದಿರಬಹುದೆಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸರು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ವಿನೋದ್ ಅವರು ಪತ್ನಿ, ಇಬ್ಬರು ಹೆಣ್ಮಕ್ಕಳನ್ನ ಅಗಲಿದ್ದಾರೆ.
The body of a 49-year-old man from Kumpala was found on the Someshwar beach on Saturday morning, with police suspecting suicide due to alleged harassment by a private finance firm. The deceased has been identified as Vinod Kumpala (49), a resident of Chethana Nagar, Kumpala.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm