ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm