ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
22-09-25 03:31 pm
HK News Desk
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
22-09-25 01:51 pm
Mangalore Correspondent
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm