ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm