ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am