ಬ್ರೇಕಿಂಗ್ ನ್ಯೂಸ್
23-09-25 05:49 pm Mangalore Correspondent ಕರಾವಳಿ
ಪುತ್ತೂರು, ಸೆ.23 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ಮೇರಿಸ್ ಆದೇಶ ಮಾಡಿದ್ದಾರೆ.
ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ 32 ಪ್ರಕರಣ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡುತ್ತಾರೆ ಎಂಬ ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ಪುತ್ತೂರು ಎಸಿಗೆ ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ ಪುತ್ತೂರು ವಿಭಾಗಾಧಿಕಾರಿ ಸೆ.20ರಿಂದ ತೊಡಗಿ ಒಂದು ವರ್ಷ ಕಾಲ ಗಡೀಪಾರು ಮಾಡಿ ಆದೇಶ ಮಾಡಿದ್ದಾರೆ.
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯನಿಗೆ ಆಶ್ರಯ ಕೊಟ್ಟಿದ್ದು ಸೇರಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಬಿಎಲ್ ಸಂತೋಷ್ ವಿರುದ್ಧ ಹೇಳಿಕೆ ನೀಡಿದ್ದು ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಐದಾರು ಎಫ್ಐಆರ್ ದಾಖಲಾಗಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಸಂತೋಷ್ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿ ಒಂದು ದಿನ ಜೈಲಿನಲ್ಲಿ ಇರಿಸಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದು ಬೆಳ್ತಂಗಡಿ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಧರ್ಮಸ್ಥಳ ವಿರುದ್ಧ ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದರು. ಸೌಜನ್ಯಾ ಪ್ರಕರಣದಲ್ಲಿ ಆರೋಪಿಯೆಂದು ಗುರುತಿಸಿದ್ದ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಬಳಿಕ ಇಡೀ ರಾಜ್ಯದಲ್ಲಿ ಪ್ರತಿಭಟನೆ ಕಾರ್ಯಕ್ರಮ ನಡೆಸಿ ಸಾವಿರಾರು ಜನರು ಸೌಜನ್ಯಾ ಪರ ಅಭಿಯಾನ ಮಾಡುವಷ್ಟರ ಮಟ್ಟಿಗೆ ಮಾಡಿದ್ದರು. ಇದೀಗ ಅವರನ್ನೇ ಬೆಳ್ತಂಗಡಿಯಿಂದ ಉತ್ತರ ಕರ್ನಾಟಕದ ಜಿಲ್ಲೆಯೊಂದಕ್ಕೆ ಗಡೀಪಾರು ಮಾಡಿ ಹೋರಾಟ ಹತ್ತಿಕ್ಕುವ ಯತ್ನ ನಡೆದಿದೆ.
ಪುತ್ತೂರು ಎಸಿ ಕೋರ್ಟಿನಲ್ಲಿ ಬಂಟ್ವಾಳ ಡಿವೈಎಸ್ಪಿ ಮತ್ತು ತಿಮರೋಡಿ ಪರ ವಕೀಲರು ಹಾಜರಾಗಿದ್ದರು. ಆದೇಶ ಪ್ರಕಾರ, ಪೊಲೀಸರು ಅಥವಾ ನ್ಯಾಯಾಲಯದ ನೋಟಿಸ್ ಇದ್ದಾಗ ಮಾತ್ರ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶ ಅನುಮತಿ ಇರುತ್ತದೆ. ಈ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಅವಕಾಶ ಇರುತ್ತದೆ.
Puttur Assistant Commissioner Stella Maris has ordered the externment of Soujanya case activist Mahesh Shetty Timarodi to Manvi taluk of Raichur district for a period of one year. According to police records, as many as 32 cases have been registered against Timarodi at Belthangady police station. Citing the possibility of disturbance to law and order in the future, Belthangady police submitted a report to the Puttur AC, based on which the externment order was issued on September 20.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm