ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm