ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am