ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm